Archive for April, 2009

ಮರೆಯಾದ ಬಯಲುಸೀಮೆಯ ಸುಬ್ಬುಲಕ್ಷ್ಮಿ ಸಿರಿಯಜಿ

‘ಜಾನಪದ ಕೋಗಿಲೆ’ ಎಂದೇ ಖ್ಯಾತರಾಗಿದ್ದ, ಬಯಲು ಸೀಮೆಯ ಸುಬ್ಬುಲಕ್ಷ್ಮಿ, ಕನ್ನಡ ಜಾನಪದ ಲೋಕದ  ಹಿರಿಯ ಗಾಯಕಿ ಚಳ್ಳಕೆರೆಯ ಸಿರಿಯಜ್ಜಿ ಇನ್ನಿಲ್ಲ. ಹಲವು ದಶಕಗಳ ಕಾಲ ಜಾನಪದ ಜಗತ್ತಿನ ಅನಭಿಷಕ್ತ ಸಾಮ್ರಾಜ್ಙಿಯಾಗಿ, ತೆರೆಯ ಮರೆಯಲ್ಲಿಯೇ ಬದುಕಿ ಮಾಯವಾದ ಮಧುರ ಕಂಠದ ನಾಡೋಜ ಸಿರಿಯಜ್ಜಿಗೆ ನುಡಿ ನಮನ

ಇದು ಎಂಬಿ, ಜಿಬಿ ಮೆಮೊರಿ ಕಾಲ. ಹನ್ನೆರಡಾರಲಿ ಎಷ್ಟು ಎಂಬುದು ಥಟ್ಟಂತ ಹೊಳೆಯುವುದಿಲ್ಲ. ನಾಲ್ಕು ಮಂದಿ ಸ್ನೇಹಿತರ ಮೊಬೈಲ್ ನಂಬರ್ ಕೇಳಿದರೆ, ಎರಡನ್ನು ತಡವರಿಸುತ್ತಾ ಹೇಳಿ, ಮೂರನೆಯದ್ದಕ್ಕೆ ಮೊಬೈಲ್ನಲ್ಲಿ ಹುಡುಕುವವರ ಕಾಲವಿದು. ಇಂಥವರ ನಡುವೆ ಸಾವಿರಾರು ಪದ್ಯಗಳನ್ನು ತಡವರಿಸದೆ, ನಿರರ್ಗಳವಾಗಿ ಹಾಡುವವರಿದ್ದಾರೆ. ಅಂಥ ಒಂದು ಅಚ್ಚರಿ ಪ್ರತಿಭೆ, ಮೌಖಿಕ ಪರಂಪರೆಯ ದನಿ ನಮ್ಮೂರಲ್ಲಿದೆ. ಅದು ಜಾನಪದ ಸಿರಿ. ಹೆಸರು ಸಿರಿಯಜ್ಜಿ!

siriyajji

ಹೆಸರಿನಲ್ಲೇ ಸಿರಿ ಇದೆ. ಅದು ಜಾನಪದ ಸಿರಿ. ನಮ್ಮೊಡನೇ ಇರುವ ಮೌಖಿಕ ಪರಂಪರೆಯ ದನಿ. ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಗೊಲ್ಲರಹಟ್ಟಿ ಯಾರಿಗೆ ಗೊತ್ತಿದೆ? ಇಂಥ ಅಜ್ಞಾತವೆನ್ನಬಹುದಾದ ಹಳ್ಳಿಯಲ್ಲಿ ಹುಟ್ಟಿದಾಕೆ ಸಿರಿಯಜ್ಜಿ. ಯಾವಾಗ ಹುಟ್ಟಿದ್ದೋ ಆಕೆಗೆ ಅದು ತಿಳಿಯದು. ಯಾವುದಾದರೂ ಒಂದು ಹಬ್ಬದ ಹಿಂದು ಮುಂದು, ಹುಣ್ಣಿಯ ಆಚೀಚೆ ಎಂದು ನೆನಪಿಸಿ ಕೊಂಡೂ ಹೇಳಲಾರಳು.
ಆದರೆ ಆಕೆ ದನಿ ಎತ್ತಿದರೆ ಸಾವಿರಾರು ಹಾಡುಗಳು ಅನುರಣಿಸುತ್ತವೆ. ಗೊಲ್ಲರಹಟ್ಟಿಯಲ್ಲಷ್ಟೇ ಅಲ್ಲ, ಜಾನಪದ ಜಗತ್ತಿನ ತುಂಬಾ. ಅಕ್ಕಿ ಆರಿಸುವಾಗ, ಸುಗ್ಗಿ ಹಬ್ಬದಲ್ಲಿ, ಊರ ದೇವತೆಯ ಜಾತ್ರೆಯಲ್ಲಿ, ಬೆಳದಿಂಗಳ ರಾತ್ರಿಯಲ್ಲಿ ಜೋಗುಳ ಹಾಡುತ್ತಾ ಎಲ್ಲಾ ಸಂತಸದ, ಸಮಾಧಾನದ ಗಳಿಗೆಗೂ ಹಾಡುತ್ತಾ ಹಾಡುಗಳ ಸಾಮ್ರಾಜ್ಞಿ ಎನಿಸಿಕೊಂಡಾಕೆ ಈ ಸಿರಿಯಜ್ಜಿ.
ಎಲ್ಲಿ ಕಲಿತೆ? ಎಂದು ಕೇಳಿದ್ದೆವು
ಆಕೆ ಬಿಚ್ಚಿಟ್ಟಿದ್ದು ತನ್ನ ಹಿಂದಿದ್ದ ಮೌಖಿಕ ಸಂಸ್ಕೃತಿಯೊಂದರ ಕಥೆ. ಅದರ ಭಾಗವಾಗಿದ್ದ ತನ್ನಂತೆ ತಮ್ಮ ನಿತ್ಯದ ಬದುಕನ್ನು ಹಾಡುತ್ತಾ ಕಳೆದ ತನ್ನ ತಾಯಿ, ಅಜ್ಜಿಯರ, ತನ್ನೊಂದಿಗೆ ದನಿಗೂಡಿಸಿದ್ದ ಗೆಳತಿಯರ ಕಥೆ.
ಕುರಿ ಕಾಯುತ್ತಾ, ಮನೆಯ ಕೆಲಸ ಗಳನ್ನು ಮಾಡುತ್ತಾ, ತಾವೇ ಕಟ್ಟಿದ ಪದಗಳನ್ನು ಹಾಡಿದರು. ಮನೆಯಲ್ಲಿ ಹುಟ್ಟಿದ ಮಗುವಿನ ಸಂಭ್ರಮ, ಗಂಡನಿಲ್ಲದ ಬೇಸರದ ನೋವು ಎಲ್ಲವೂ ಅಲ್ಲಿ ಪದಗಳಾದವು. ಕಾಯುವ ದೇವರ ಆರಾಧಿಸಿದರು.
ಸಿರಿಯಜ್ಜಿ ಇಂಥ ಸಾವಿರ ಪದಗಳನ್ನು ಹಾಡುತ್ತಲೇ ಬಂದರು ಎಂಬುದು ಜಿಬಿ ಮೆಮೊರಿ ಕುರಿತು ಮಾತನಾಡುವ ನಮ್ಮ ಕಾಲಕ್ಕೆ ನಿಜಕ್ಕೂ ಅಚ್ಚರಿ.

April 2, 2009 at 12:58 pm 1 comment


 

April 2009
S M T W T F S
« Mar    
 1234
567891011
12131415161718
19202122232425
2627282930  

Recent Posts

Blog Stats

  • 922 hits

Follow

Get every new post delivered to your Inbox.